ಈಶ್ವರಪ್ಪ ರಾಜೀನಾಮೆ ನೀಡಿದ ನಂತರ ಬೊಮ್ಮಾಯಿ ಸಚಿವ ಸಂಪುಟ!

Bommai New Cabinet

ಕರ್ನಾಟಕದ ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಗೆ 2022ರಲ್ಲಿ ಇನ್ನೂ ಕಾಲ ಕೂಡಿ ಬಂದಿಲ್ಲ.

ಆದರೆ, ಬಿಜೆಪಿ ಸರ್ಕಾರದ ಪ್ರಮುಖ ಸಚಿವ, ಹಿರಿಯ ಬಿಜೆಪಿ ಮುಖಂಡ ಕೆಎಸ್ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹೀಗಾಗಿ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮತ್ತೊಂದು ಖಾತೆ ತುಂಬಾ ಬೇಕಾಗಿದ್ದು, ಆರಗ ಜ್ಞಾನೇಂದ್ರ ಅವರಿಗೆ ಗೃಹ ಮತ್ತು ಸುನಿಲ್ ಕುಮಾರ್‌ಗೆ ಇಂಧನ ಖಾತೆ ನೀಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದ ಬೊಮ್ಮಾಯಿ.

ಈಗ ಈಶ್ವರಪ್ಪ ಬಳಿ ಇದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಯಾರಿಗೆ ನೀಡಬಹುದು ಎಂಬ ಕುತೂಹಲ ಮೂಡಿಸಿದೆ.

ಭಾರಿ ಬೇಡಿಕೆ, ಒತ್ತಡ ಕಂಡು ಬಂದರೂ ಡಿಸಿಎಂ ಹುದ್ದೆ ಸೃಷ್ಟಿಸದೇ ಸಂಪುಟ ರೂಪಿಸಿದ್ದ ಸಿಎಂ ಬೊಮ್ಮಾಯಿ.

ಮತ್ತೊಮ್ಮೆ ಸಂಪುಟ ವಿಸ್ತರಣೆ ಮಾಡಲು ಮುಂದಾಗಿದ್ದ ಕಾಲದಲ್ಲೇ ಅಕಾಲಿಕವಾಗಿ ಸಚಿವರೊಬ್ಬರು ಸಂಪುಟದಿಂದ ಹೊರ ನಡೆಯಬೇಕಾದ ಪ್ರಸಂಗ ನಡೆದಿದೆ.

ಹೈಕಮಾಂಡ್ ಅಣತಿಯಂತೆ 6 ಹೊಸಬರು, ಅನುಭವವುಳ್ಳರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದ ಬೊಮ್ಮಾಯಿ, ಈಗ ಮುಂದಿನ ಚುನಾವಣೆ ತನಕ ಹಾಲಿ ಸಂಪುಟವನ್ನೇ ಮುಂದುವರೆಸಿದರೂ ಅಚ್ಚರಿಯಾಗಬೇಕಿಲ್ಲ.

ಬಿಬಿಎಂಪಿ ಚುನಾವಣೆ, ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟುಕೊಂಡು ಬಾಕಿ ಉಳಿದಿರುವ 05 ಸ್ಥಾನಗಳನ್ನು ತುಂಬಬಹುದಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸ್ಥಾನವನ್ನು ಆಗಸ್ಟ್ 4, 2021ರಿಂದ ಏಪ್ರಿಲ್ 15, 2022ರ ತನಕ ಕೆಎಸ್ ಈಶ್ವರಪ್ಪ ನಿಭಾಯಿಸಿದ್ದರು.

ರಾಜೀನಾಮೆಯಿಂದ ತೆರವಾದ ಈ ಖಾತೆಯನ್ನು ಸದ್ಯ ಸಿಎಂ ಬೊಮ್ಮಾಯಿ ತಮ್ಮ ಹತ್ರಾನೇ ಇಟ್ಟುಕೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಹಿರಿಯ ಸಚಿವರೊಬ್ಬರಿಗೆ ಹೆಚ್ಚುವರಿ ಖಾತೆ ಹೊಣೆ ನೀಡಬಹುದು.

ಸಚಿವರ ಶಿಕ್ಷಣ ಅರ್ಹತೆ

2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಜಾತಿವಾರು ಲೆಕ್ಕಾಚಾರದಂತೆ ಕೂಡಾ ಲಿಂಗಾಯತ, ದಲಿತ, ಹಿಂದುಳಿತ ವರ್ಗಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಲಾಗಿದೆ.

ಸಚಿವ ಸಂಪುಟದಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ 17 ಸಚಿವರು ಪದವಿ ಶಿಕ್ಷಣವನ್ನು ಮುಗಿಸಿದ್ದರೆ, ಉಳಿದ 12 ಸಚಿವರಲ್ಲಿ ಪಿಯುಸಿ, ಎಸ್‌ಎಸ್‌ಎಲ್‌ಸಿ ಅಥವಾ ಅದಕ್ಕಿಂತ ಕಡಿಮೆ ಶಿಕ್ಷಣವನ್ನು ಪಡೆದುಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಆಯ್ಕೆಯಾದವರ ಪೈಕಿ 8 ಲಿಂಗಾಯತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, 1 ಎಸ್ ಟಿ ಮತ್ತು ಒಬ್ಬ ಮಹಿಳೆಗೆ ಸ್ಥಾನವನ್ನು ಕಲ್ಪಿಸಲಾಗಿದೆ.

ಯಡಿಯೂರಪ್ಪ ಸಂಪುಟದಲ್ಲಿದ್ದ ಜಗದೀಶ್ ಶೆಟ್ಟರ್, ಆರ್. ಶಂಕರ್, ಸಿ. ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್, ಎಸ್. ಸುರೇಶ್ ಕುಮಾರ್ ಮತ್ತು ಲಕ್ಷ್ಮಣ ಸವದಿ ಅವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿತ್ತು.

ಬೊಮ್ಮಾಯಿ ಸಚಿವ ಸಂಪುಟ-Bommai New Cabinet

ಕ್ರಮ ಸಂ.ಬಸವರಾಜ ಬೊಮ್ಮಾಯಿ ಸಚಿವ ಸಂಪುಟ

ಖಾತೆ
01ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ, DPAR, ಹಣಕಾಸು, ಗೃಹ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಗುಪ್ತಚರ (ಗೃಹ ಖಾತೆಯಿಂದ), ಸಂಪುಟ ವ್ಯವಹಾರ,  
02ಅರಗ ಜ್ಞಾನೇಂದ್ರಗೃಹ(ಗುಪ್ತಚರ ಹೊರತುಪಡಿಸಿ)
03ಗೋವಿಂದ ಎಂ ಕಾರಜೋಳಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆ(ಜಲ ಸಂಪನ್ಮೂಲ)
04ಡಾ. ಸಿ.ಎಸ್ ಅಶ್ವಥ ನಾರಾಯಣಉನ್ನತ ಶಿಕ್ಷಣ ಸಚಿವ, ಐಟಿ-ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ, ಹೆಚ್ಚುವರಿಯಾಗಿ ಕೌಶಲ್ಯಾಭಿವೃದ್ಧಿ
05ಆರ್. ಅಶೋಕಕಂದಾಯ(ಮುಜರಾಯಿ ಹೊರತುಪಡಿಸಿ)
06ಉಮೇಶ್ ಕತ್ತಿಅರಣ್ಯ, ಆಹಾರ, ಪಡಿತರ ವಿತರಣೆ, ಗ್ರಾಹಕ ವ್ಯವಹಾರ
07ಬಿ. ಶ್ರೀರಾಮುಲುಸಾರಿಗೆ, ಎಸ್ ಟಿ ಅಭಿವೃದ್ಧಿ
08ಬಿ. ಸಿ ನಾಗೇಶ್ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಾಗೂ ಸಕಾಲ
09ವಿ ಸೋಮಣ್ಣವಸತಿ
10ಸುನಿಲ್ ಕುಮಾರ್ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ
11ಎಸ್ ಅಂಗಾರಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ
12ಕೋಟಾ ಶ್ರೀನಿವಾಸ ಪೂಜಾರಿಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ
13ಜೆ. ಸಿ ಮಾಧುಸ್ವಾಮಿಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ
14ಚಂದ್ರಕಾಂತಗೌಡ ಚೆನ್ನಪ್ಪಗೌಡ ಪಾಟೀಲಲೋಕೋಪಯೋಗಿ
15ಶಂಕರ್ ಬಿ, ಪಾಟೀಲ ಮುನ್ನೇನಕೊಪ್ಪಜವಳಿ, ಸಕ್ಕರೆ
16ಪ್ರಭು ಚೌಹಾಣ್ಪಶು ಸಂಗೋಪಣೆ
17ಜೊಲ್ಲೆ ಶಶಿಕಲಾ ಅಣ್ಣಾ ಸಾಹೇಬ್ಮುಜರಾಯಿ, ಹಜ್ ಮತ್ತು ವಕ್ಫ್
18ಆಚಾರ್ ಹಾಲಪ್ಪ ಬಸಪ್ಪಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ, ಹಿರಿಯ ನಾಗರಿಕರ ಸಬಲೀಕರಣ
19ಆನಂದ್ ಸಿಂಗ್ಪ್ರವಾಸೋದ್ಯಮ, ಪರಿಸರ
20ಕೆ. ಸಿ ನಾರಾಯಣ ಗೌಡಕ್ರೀಡೆ, ಯುವಜನ, ರೇಷ್ಮೆ
21ಮುರುಗೇಶ್ ನಿರಾಣಿಬೃಹತ್ ಹಾಗೂ ಮಧ್ಯಮ ಕೈಗಾರಿಕೆ
22ಅರೆಬೈಲು ಹೆಬ್ಬಾರ್ ಶಿವರಾಂಕಾರ್ಮಿಕ
23ಎಸ್. ಟಿ ಸೋಮಶೇಖರ್ಸಹಕಾರ
24ಬಸನಗೌಡ ಚನ್ನಬಸವನಗೌಡ ಪಾಟೀಲ್ಕೃಷಿ
25ಬಿ.ಎ ಬಸವರಾಜ (ಬೈರತಿ)ನಗರಾಭಿವೃದ್ಧಿ(ಬೆಂಗಳೂರು ಹೊರತುಪಡಿಸಿ)
26ಡಾ. ಕೆ ಸುಧಾಕರ್ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ
27ಕೆ ಗೋಪಾಲಯ್ಯಅಬಕಾರಿ
28ಎನ್ ನಾಗರಾಜ (ಎಂ.ಟಿ.ಬಿ)ಸಣ್ಣ ಕೈಗಾರಿಕೆ, ಸಾರ್ವಜನಿಕ ವಲಯ ಕೈಗಾರಿಕೆ
29ಮುನಿರತ್ನತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ
Bommai New Cabinet

ಸಚಿವ ಕೆ.ಎಸ. ಈಶ್ವರಪ್ಪ ರಾಜೀನಾಮೆ ಘೋಷಣೆ!-Santosh

https://jcs.skillindiajobs.com/

Social Share

Leave a Reply

Your email address will not be published. Required fields are marked *